ಕೋಟ ಹಿರೇಮಹಾಲಿಂಗೇಶ್ವರ ಮಿತ್ರ ವೃಂದ ಇದರ ಸುವರ್ಣ ಸಂಭ್ರಮ. ಗುರು ಕಿರಣ್ ಸಂಗೀತ ಕಾರ್ಯಕ್ರಮ ಸೇರಿ 8 ದಿನಗಳ ಕಾಲ ಸಂಸ್ಕೃತಿಕ ಸಂಭ್ರಮ.

ಕೋಟ ಹಿರೇಮಹಾಲಿಂಗೇಶ್ವರ ಮಿತ್ರ ವೃಂದ ಇದರ ಸುವರ್ಣ ಸಂಭ್ರಮ. ಗುರು ಕಿರಣ್ ಸಂಗೀತ ಕಾರ್ಯಕ್ರಮ ಸೇರಿ 8 ದಿನಗಳ ಕಾಲ ಸಂಸ್ಕೃತಿಕ ಸಂಭ್ರಮ.

ಕೋಟ ಶ್ರೀ ಹಿರೇಮಹಾಲಿಂಗೇಶ್ವರ ದೇವಸ್ಥಾನ ಇದರ ರಥೋತ್ಸವದ ಅಂಗವಾಗಿ ಶ್ರೀ ಹಿರೇಮಹಾಲಿಂಗೇಶ್ವರ ಮಿತ್ರ ವೃಂದ(ರಿ ) ಕೋಟ ಇವರ ವತಿಯಿಂದ ನಡೆಯುವ ಸುವರ್ಣ ಸಂಭ್ರಮ ಕಾರ್ಯಕ್ರಮ ಜನವರಿ 1 ರಿಂದ ಪೆಬ್ರವರಿ 2 ತನಕ ನಡೆಯಲಿದೆ.

ಫೆಬ್ರುವರಿ ಒಂದರಂದು ಕೋಟ ಶ್ರೀ ಹಿರಿ ಮಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮನ್ಮಹಾರಥೋತ್ಸವ ನಡೆಯಲಿದೆ.ಜಾತ್ರೆಯ ಅಂಗವಾಗಿ ಕಳೆದ 50 ವರ್ಷದಿಂದ ಶ್ರೀ ಹಿರೇಮಹಾಲಿಂಗೇಶ್ವರ ಮಿತ್ರ ವೃಂದ ಕೋಟ ಇವರು ಸತತ ಹಲವು ಸಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಿಕೊಂಡು ಬಂದಿರುತ್ತಾರೆ. ಈ ವರ್ಷ 50ನೇ ವರ್ಷದ ಸುವರ್ಣ ಸಂಭ್ರಮದ ಹೊಸ್ತಿಲಿನಲ್ಲಿ ಎಂಟು ದಿನಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜನವರಿ 26ರಂದು ಶಾಂಭವಿ ಶಾಲಾ ಮಕ್ಕಳ ವೈವಿಧ್ಯಮಯ ಕಾರ್ಯಕ್ರಮ,ಜನವರಿ 27ರಂದು ಎಂ.ಡಿ. ಸಿ.ನ್ರತ್ಯ ತಂಡ ಕೋಟ ಇವರಿಂದ ನ್ರತ್ಯ ವೈಭವ, ಜನವರಿ 28 ರಂದು ಹಿರೇಮಹಾಲಿಂಗೇಶ್ವರ ಮಿತ್ರ ವೃಂದದವರಿಂದ ಕಾರ್ಯಕ್ರಮ ವೈವಿದ್ಯ, 29ರಂದು ಅರೆಹೊಳೆ ಪ್ರತಿಷ್ಠಾನ ಇವರಿಂದ ಕೊಲ್ಲೂರು ಕ್ಷೇತ್ರ ಮಹಾತ್ಮೆ,ಜನವರಿ 30ರಂದು ದೇವದಾಸ್ ಕಾಫಿಕಾಡ್ ಮಂಗಳೂರು ಇವರಿಂದ ನನ್ನ ಕಥೆ ನೂತನ ನಾಟಕ,ಜನವರಿ 31ರಂದು ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಶಮಿತಾ ಮಲ್ನಾಡ್ ತಂಡದವರಿಂದ ಸಂಗೀತ ರಸಮಂಜರಿ,ಫೆಬ್ರವರಿ ಎರಡರಂದು ಪೆರ್ಡೂರು ಮೇಳದವರಿಂದ ಚದುರಂಗ ಯಕ್ಷಗಾನ ಬಯಲಾಟ, ಫೆಬ್ರವರಿ ಎರಡರಂದು ಕೆ.ಡಿ.ಸಿ..ನಾಟ್ಯ ತಂಡ ಸಾಲಿಗ್ರಾಮ ಇವರಿಂದ ನೃತ್ಯ ವೈಭವ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಎಲ್ಲಾ ಕಾರ್ಯಕ್ರಮಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರೋತ್ಸಾಹ ಮತ್ತು ಸಹಕಾರ ನೀಡಬೇಕಾಗಿ ವಿನಂತಿಸಿರುತ್ತಾರೆ.

Join WhatsApp

Join Now

Join Telegram

Join Now

Read more

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment