ಬೈಕ್ ಪಲ್ಟಿ: ಯಕ್ಷಗಾನ ಕಲಾವಿದರ ಪುತ್ರ ಮೃತ್ಯು

On: February 2, 2026 7:25 AM
Follow Us:

ಬೈಕ್ ಪಲ್ಟಿ: ಯಕ್ಷಗಾನ ಕಲಾವಿದರ ಪುತ್ರ ಮೃತ್ಯು


ಕುಂದಾಪುರ: ಸವಾರನ ನಿಯಂತ್ರಣ ತಪ್ಪಿ ಬೈಕ್ ಸ್ಕಿಡ್ ಆಗಿ ಪಲ್ಟಿ ಹೊಡೆದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಬೈಂದೂರು ತಾಲೂಕಿನ ನಾಡಗುಡ್ಡೆಯಂಗಡಿಯ ಬೆಳ್ಳಾಡಿ ಪ್ರದೇಶದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಕೋಟ ಮಣೂರು ಪಡುಕರೆ ನಿವಾಸಿ ಪ್ರಭಾಕರ್ ಮೆಂಡನ್ ಎಂದು ಗುರುತಿಸಲಾಗಿದೆ. ಅವರು ಭಾನುವಾರ ರಾತ್ರಿ ತಮ್ಮ ನಿವಾಸ ಮಣೂರು ಪಡುಕರೆಯಿಂದ ಪತ್ನಿಯ ಮನೆಗೆ ತೆರಳುತ್ತಿದ್ದ ವೇಳೆ, ನಾಡಗುಡ್ಡೆಯಂಗಡಿಯ ಬೆಳ್ಳಾಡಿ ಬಳಿ ಅವರ ಬೈಕ್ ಏಕಾಏಕಿ ಸ್ಕಿಡ್ ಆಗಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡ ಪ್ರಭಾಕರ್ ಮೆಂಡನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಕುರಿತು ಮೃತರ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೃತ ಪ್ರಭಾಕರ್ ಮೆಂಡನ್ ಅವರು ಖ್ಯಾತ ಯಕ್ಷಗಾನ ಕಲಾವಿದ ದಿವಂಗತ ಮೊಳಹಳ್ಳಿ ಹೆರಿಯ ನಾಯಕ್ ಅವರ ಹಿರಿಯ ಪುತ್ರರಾಗಿದ್ದು, ಅವರ ಅಕಾಲಿಕ ನಿಧನದಿಂದ ಕುಟುಂಬದವರಲ್ಲಿ ಆಳವಾದ ಶೋಕದ ವಾತಾವರಣ ಆವರಿಸಿದೆ. ಮೃತರು ಪತ್ನಿ, ಒಬ್ಬ ಗಂಡು ಹಾಗೂ ಒಬ್ಬ ಹೆಣ್ಣು ಮಗುವನ್ನು ಅಗಲಿದ್ದಾರೆ.

Join WhatsApp

Join Now

Join Telegram

Join Now

Read more

ಅಮಾಸೆಬೈಲಿನಲ್ಲಿ 14 ಕೊರಗ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ: ಸಮಾಜ ಸೇವೆಯಲ್ಲಿ ಎಚ್. ಎಸ್. ಆರ್. ಶೆಟ್ಟಿಯವರ ಮಹತ್ವಾಕಾಂಕ್ಷಿ ಹೆಜ್ಜೆ – ಪೇಜಾವರ ಶ್ರೀ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವಿನಿಂದ 205 ಶಾಲೆಗಳಿಗೆ ಬೆಂಚ್-ಡೆಸ್ಕ್ ವಿತರಣೆ: ಹೊನ್ನವಳ್ಳಿಯಲ್ಲಿ ಸಚಿವ ವಿ.ಸೋಮಣ್ಣರಿಂದ ಹಸ್ತಾಂತರ

ಸಾಲಿಗ್ರಾಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರರ ಮಹಾಪೂಜೆ : ಕುಟುಂಬ ಸಮೇತ ಶ್ರೀ ಗುರುನರಸಿಂಹ ಸ್ವಾಮಿಗೆ ವಿಶೇಷ ಸೇವೆ

ಪ್ರಕೃತಿ ಮಡಿಲಿನಲ್ಲಿ ನಾಯಕತ್ವದ ಪಾಠ: ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಸ್ಕೌಟ್ಸ್ ದಿನಾಚರಣೆ: ಸೌಹಾರ್ದಿತ ವಾತಾವರಣ ನಿರ್ಮಾಣವೇ ಸ್ಕೌಟ್ಸ್ & ಗೈಡ್ಸ್ ಮೂಲ ಉದ್ದೇಶ. ಇಂದ್ರಾಳಿ ಜಯಕರ್ ಶೆಟ್ಟಿ

ವಿದ್ಯಾರಣ್ಯ ಶಿಶು ವಿಹಾರದಲ್ಲಿ ಪದವಿ ಪ್ರದಾನ: ಆತ್ಮವಿಶ್ವಾಸ ಹೆಚ್ಚಿಸುವ ಶಿಕ್ಷಣ ಅಗತ್ಯ. ಕಾಂತರ ಕಮಲ ಖ್ಯಾತಿಯ ಮಾನಸಿ ಸುಧೀರ್.

ಪುನರ್ಜನ್ಮ ಪಡೆದ ‘ಯಕ್ಷ ಚಂದ್ರಿಕೆ’: ಮಂದಾರ್ತಿ ರಥೋತ್ಸವದಲ್ಲಿ ಮತ್ತೆ ಗೆಜ್ಜೆ ಕಟ್ಟಿದ ಶಶಿಕಾಂತ್ ಶೆಟ್ಟಿ!

Leave a Comment