ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ನೂತನ ಜಿಲ್ಲಾಧ್ಯಕ್ಷರಾಗಿ ರವೀಶ್ ಎಸ್. ಕೊರವಡಿ ಆಯ್ಕೆ

ಉಡುಪಿ: ಉಡುಪಿ ಜಿಲ್ಲೆಯ ಪ್ರತಿಷ್ಠಿತ ಮೊಗವೀರ ಯುವ ಸಂಘಟನೆಯ ನೂತನ ಜಿಲ್ಲಾಧ್ಯಕ್ಷರಾಗಿ ರವೀಶ್ ಎಸ್. ಕೊರವಡಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಇವರು ಕಳೆದ ಸಾಲಿನಲ್ಲಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಕೋಟೇಶ್ವರ ಮೊಗವೀರ ಯುವ ಸಂಘಟನೆಯ ಸ್ಥಾಪನೆಯ ಆರಂಭದಿಂದಲೇ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ, ಅಧ್ಯಕ್ಷರಾಗಿಯೂ ಕರ್ತವ್ಯ ನಿಭಾಯಿಸಿರುವ ಅನುಭವವನ್ನು ಹೊಂದಿದ್ದಾರೆ.
ನಾಡೋಜ ಜೀ. ಶಂಕರ್ ಅವರ ಶಿಫಾರಸ್ಸಿನ ಮೇರೆಗೆ ನಡೆದ ಆಯ್ಕೆ ಪ್ರಕ್ರಿಯೆಗೆ ಸಂಘಟನೆಯ ಸರ್ವ ಸದಸ್ಯರು ಅನುಮೋದನೆ ನೀಡಿದ್ದು, ಒಮ್ಮತದ ಮೂಲಕ ರವೀಶ್ ಎಸ್. ಕೊರವಡಿ ಅವರನ್ನು ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.





