ವಿದ್ಯಾರಣ್ಯ ಶಿಶು ವಿಹಾರದಲ್ಲಿ ಪದವಿ ಪ್ರದಾನ: ಆತ್ಮವಿಶ್ವಾಸ ಹೆಚ್ಚಿಸುವ ಶಿಕ್ಷಣ ಅಗತ್ಯ. ಕಾಂತರ ಕಮಲ ಖ್ಯಾತಿಯ ಮಾನಸಿ ಸುಧೀರ್.

On: February 19, 2026 2:10 PM
Follow Us:

ವಿದ್ಯಾರಣ್ಯ ಶಿಶು ವಿಹಾರದಲ್ಲಿ ಪದವಿ ಪ್ರದಾನ: ಆತ್ಮವಿಶ್ವಾಸ ಹೆಚ್ಚಿಸುವ ಶಿಕ್ಷಣ ಅಗತ್ಯ. ಕಾಂತರ ಕಮಲ ಖ್ಯಾತಿಯ ಮಾನಸಿ ಸುಧೀರ್.


ಕುಂದಾಪುರ, ಫೆ.19: ಆತ್ಮವಿಶ್ವಾಸವನ್ನು ಬೆಳೆಸುವ ಶಿಕ್ಷಣ ಪದ್ಧತಿಯನ್ನು ವಿದ್ಯಾರಣ್ಯ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ನೀಡುತ್ತಿದೆ ಎಂದು ನೃತ್ಯ ನಿಕೇತನ ಕೊಡವೂರಿನ ಶಾಸ್ತ್ರೀಯ ನೃತ್ಯ ಕಲಾವಿದೆ ಹಾಗೂ ಕಾಂತರ ‘ಕಮಲಕ್ಕ’ ಖ್ಯಾತಿಯ ಪಾತ್ರಧಾರಿ ಮಾನಸಿ ಸುಧೀರ್ ಹೇಳಿದರು.

ಅವರು ಗುರುವಾರ ಕುಂದಾಪುರ ತಾಲೂಕಿನ ಯಡ್ಯಾಡಿ–ಮತ್ಯಾಡಿಯ ವಿದ್ಯಾರಣ್ಯ ಇಂಗ್ಲಿಷ್ ಮಾಧ್ಯಮ ಶಾಲೆ ಹಾಗೂ ಸುಜ್ಞಾನ ಶಿಕ್ಷಣ ಸಂಸ್ಥೆ ವತಿಯಿಂದ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಆಯೋಜಿಸಲಾದ ನರ್ಸರಿ, ಎಲ್‌ಕೆಜಿ ಮತ್ತು ಯುಕೆಜಿ ವಿಭಾಗದ ವಿದ್ಯಾರ್ಥಿಗಳ “ಕಿಂಡರ್‌ಗಾರ್ಟನ್” (ಶಿಶುವಿಹಾರ)ಪದವಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರಣ್ಯದಲ್ಲಿ ಮಕ್ಕಳು ಸುರಕ್ಷಿತ ವಾತಾವರಣದಲ್ಲಿ ಆತ್ಮವಿಶ್ವಾಸದಿಂದ ಬೆಳೆಯುತ್ತಿದ್ದಾರೆ. ಪ್ರತಿಯೊಂದು ಮಗುವಿನಲ್ಲಿರುವ ಉತ್ತಮ ಗುಣಗಳನ್ನು ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ. ಮಕ್ಕಳಲ್ಲಿ ಪಾಸಿಟಿವಿಟಿ ಮತ್ತು ಕಾನ್ಫಿಡೆನ್ಸ್‌ ಬೆಳೆಸುವ ಈ ರೀತಿಯ ಶಿಕ್ಷಣ ಪದ್ಧತಿಯನ್ನು ನಾನು ಬೇರೆಡೆ ಕಂಡಿಲ್ಲ ಎಂದು ಅವರು ಹೇಳಿದರು.

‘ಆಡು ಮತ್ತು ಆಡಿನ ಮರಿ’ ಹಾಗೂ ‘ಗುಡುಗುಡು ಗುಮ್ಮಟ ದೇವರು’ ಕಥೆಗಳನ್ನು ಹೇಳಿ ಮಕ್ಕಳನ್ನು ರಂಜಿಸಿದರು. ಮಕ್ಕಳಿಗೆ ಕಥೆಗಳನ್ನು ಹೇಳುವ ಮೂಲಕ ಅವರ ಆಲೋಚನಾ ಶಕ್ತಿ ಹಾಗೂ ಕಲ್ಪನೆ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಇಂದಿನ ವೇಗದ ಜೀವನದಲ್ಲಿ ಪೋಷಕರು ಮಕ್ಕಳಿಗೆ ಕಥೆ ಹೇಳುವ ಸಂಪ್ರದಾಯ ಕಡಿಮೆಯಾಗುತ್ತಿರುವುದನ್ನು ಉಲ್ಲೇಖಿಸಿದ ಅವರು, ಪುಸ್ತಕಗಳು, ಆಡಿಯೋ ಪುಸ್ತಕಗಳು ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ಮಕ್ಕಳಿಗೆ ಕಥೆಗಳನ್ನು ಪರಿಚಯಿಸಬೇಕು. ಕೇಳುವ ಸಂಸ್ಕೃತಿಯನ್ನು ಬೆಳೆಸಿದರೆ ಮಕ್ಕಳಲ್ಲಿ ಸೃಜನಶೀಲತೆ ಹೆಚ್ಚುತ್ತದೆ ಎಂದು ಸಲಹೆ ನೀಡಿದರು.
ಟಿವಿ ಮತ್ತು ಮೊಬೈಲ್‌ನಲ್ಲಿ ಅತಿಯಾದ ದೃಶ್ಯಮಾಧ್ಯಮಗಳ ಅವಲಂಬನೆಯಿಂದ ಮಕ್ಕಳ ಕಲ್ಪನೆ ಶಕ್ತಿ ಕುಂಠಿತವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅವರು ಮಾತನಾಡಿ, “ಮೂರು ವರ್ಷಗಳ ‘ನಲಿ–ಕಲಿ’ ಹಂತವನ್ನು ಪೂರ್ಣಗೊಳಿಸಿದ ಮಕ್ಕಳು ಇದೀಗ ಪ್ರಥಮ ತರಗತಿಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಶಿಕ್ಷಣ ವ್ಯವಸ್ಥೆಯ ಪರಿವರ್ತನೆಗೆ ಹೊಂದಿಕೊಳ್ಳುವಂತೆ ಈ ‘ಗ್ರಾಜುಯೇಷನ್ ಡೇ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ,” ಎಂದು ಹೇಳಿದರು.
ಮುಂದಿನ ವರ್ಷಗಳಲ್ಲಿ ಸಂಸ್ಥೆಯಲ್ಲಿ ಚಟುವಟಿಕೆ ಆಧಾರಿತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ವಿದ್ಯಾರ್ಥಿಗಳು ಪಿಯುಸಿ ಹಂತಕ್ಕೆ ತಲುಪುವ ವೇಳೆಗೆ ಅಗತ್ಯವಿರುವ ಅಖಿಲ ಭಾರತೀಯ ಮಟ್ಟದ ಸ್ಪರ್ಧಾತ್ಮಕ ಚಟುವಟಿಕೆಗಳಿಗೆ ತಯಾರಾಗುವಂತೆ ಸಮಗ್ರ ತರಬೇತಿ ನೀಡುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.
ಭಾರತೀಯ ಸಂಸ್ಕೃತಿ ಮತ್ತು ಪರಂಪರೆ ಕುರಿತು ಮಕ್ಕಳಿಗೆ ನಿರಂತರವಾಗಿ ಶಿಕ್ಷಣ ನೀಡಲಾಗುತ್ತಿದೆ. ಪ್ರತಿ ಶನಿವಾರ ವಿವಿಧ ಕ್ಷೇತ್ರಗಳ ಪರಿಣಿತರನ್ನು ಆಹ್ವಾನಿಸಿ, ಸುಮಾರು 20ಕ್ಕೂ ಅಧಿಕ ಚಟುವಟಿಕೆಗಳ ಮೂಲಕ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು.
“ಮಕ್ಕಳು ಭವಿಷ್ಯದಲ್ಲಿ ದೊಡ್ಡ ಕಲಾವಿದರು ಹಾಗೂ ಸಮಗ್ರ ವ್ಯಕ್ತಿತ್ವ ಹೊಂದಿದ ನಾಗರಿಕರಾಗಬೇಕು ಎಂಬುದು ನಮ್ಮ ಆಶಯ,” ಎಂದು ಅವರು ಅಭಿಪ್ರಾಯಪಟ್ಟರು.

ಸಂಸ್ಥೆ ಕೋಶಾಧಿಕಾರಿ ಭರತ್ ಶೆಟ್ಟಿ,
ಮುಂದಿನ ದಿನದಲ್ಲಿ ಶಾಲಾ ಮಕ್ಕಳಿಗೆ 5 ಎಕರೆಯಲ್ಲಿ ಸುಸಜ್ಜಿತವಾದ ಆಟದ ಮೈದಾನ ನಿರ್ಮಾಣವಾಗುತ್ತಿದ್ದು, ಮುಂದಿನ ದಿನದಲ್ಲಿ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗೆ ಸಹಕಾರಿಯಾಗಲಿದೆ ಎಂದರು.
ಮುಖ್ಯೋಪಾಧ್ಯಾಯರಾದ ಪ್ರದೀಪ್ ಕುಮಾರ್ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕಿ ದೀಕ್ಷಾ ಅನಿಲ್ ನಿರೂಸಿದರು
ಶಿಕ್ಷಕಿ ಶ್ರೀಮತಿ ಪ್ರಿಯಾಂಕ ಭಟ್ ವಂದಿಸಿದರು.
ಸಭಾಕಾರ್ಯಕ್ರಮದ ನಂತರ ಪುಟಾಣಿ ಮುದ್ದು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತ್ತು.

Join WhatsApp

Join Now

Join Telegram

Join Now

Read more

ಅಮಾಸೆಬೈಲಿನಲ್ಲಿ 14 ಕೊರಗ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ: ಸಮಾಜ ಸೇವೆಯಲ್ಲಿ ಎಚ್. ಎಸ್. ಆರ್. ಶೆಟ್ಟಿಯವರ ಮಹತ್ವಾಕಾಂಕ್ಷಿ ಹೆಜ್ಜೆ – ಪೇಜಾವರ ಶ್ರೀ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವಿನಿಂದ 205 ಶಾಲೆಗಳಿಗೆ ಬೆಂಚ್-ಡೆಸ್ಕ್ ವಿತರಣೆ: ಹೊನ್ನವಳ್ಳಿಯಲ್ಲಿ ಸಚಿವ ವಿ.ಸೋಮಣ್ಣರಿಂದ ಹಸ್ತಾಂತರ

ಸಾಲಿಗ್ರಾಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರರ ಮಹಾಪೂಜೆ : ಕುಟುಂಬ ಸಮೇತ ಶ್ರೀ ಗುರುನರಸಿಂಹ ಸ್ವಾಮಿಗೆ ವಿಶೇಷ ಸೇವೆ

ಪ್ರಕೃತಿ ಮಡಿಲಿನಲ್ಲಿ ನಾಯಕತ್ವದ ಪಾಠ: ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಸ್ಕೌಟ್ಸ್ ದಿನಾಚರಣೆ: ಸೌಹಾರ್ದಿತ ವಾತಾವರಣ ನಿರ್ಮಾಣವೇ ಸ್ಕೌಟ್ಸ್ & ಗೈಡ್ಸ್ ಮೂಲ ಉದ್ದೇಶ. ಇಂದ್ರಾಳಿ ಜಯಕರ್ ಶೆಟ್ಟಿ

ಪುನರ್ಜನ್ಮ ಪಡೆದ ‘ಯಕ್ಷ ಚಂದ್ರಿಕೆ’: ಮಂದಾರ್ತಿ ರಥೋತ್ಸವದಲ್ಲಿ ಮತ್ತೆ ಗೆಜ್ಜೆ ಕಟ್ಟಿದ ಶಶಿಕಾಂತ್ ಶೆಟ್ಟಿ!

ಅಂದು ಮಲ್ಪೆಯ ವೈರಲ್ ವಾಸು, ಇಂದು ಎದ್ದೇಳಲು ಒಲ್ಲೆ ಎನ್ನುವ ಸ್ಥಿತಿಯಲ್ಲಿ ವಾಸುದೇವ ಮಲ್ಪೆ..!

Leave a Comment