ಬಾಳೆಬರೆ ಘಾಟಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್: ಅದೃಷ್ಟವಶಾತ್ ಪ್ರಯಾಣಿಕರು ಪಾರು!

ಬಾಳೆಬರೆ ಘಾಟಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್: ಅದೃಷ್ಟವಶಾತ್ ಪ್ರಯಾಣಿಕರು ಪಾರು!


ಸಿದ್ದಾಪುರ, ಫೆ.28: ಸಿದ್ದಾಪುರ ಸಮೀಪದ ಬಾಳೆಬರೆ ಘಾಟಿಯಲ್ಲಿ ಶನಿವಾರ ಮಧ್ಯಾಹ್ನ ಖಾಸಗಿ ಬಸ್‌ವೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.

ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಸಮಯಕ್ಕೆ ಮುನ್ನ ಇಳಿದಿರುವುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕುಂದಾಪುರದಿಂದ ಸಾಗರದತ್ತ ಹೊರಟಿದ್ದ ‘ಶ್ರೀ ದುರ್ಗಾಂಬ’ ಹೆಸರಿನ ಬಸ್ ಸಿದ್ದಾಪುರ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ವೇಳೆ ಬಾಳೆಬರೆ ಘಾಟಿ ಪ್ರದೇಶದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ.

ಚಾಲಕ ಮತ್ತು ಸಿಬ್ಬಂದಿ ಬಸ್‌ನ್ನು ತಕ್ಷಣ ನಿಲ್ಲಿಸಿ ಪರಿಶೀಲನೆ ನಡೆಸುವಷ್ಟರಲ್ಲಿ ವಾಹನದ ಒಳಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಿದ್ದು, ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ.
ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಕವಾಗಿ ಹಬ್ಬಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದೆ. ಘಟನೆಯಿಂದಾಗಿ ಕೆಲವು ಹೊತ್ತಿನ ಕಾಲ ಘಾಟಿ ಪ್ರದೇಶದಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಇತ್ತೀಚಿನ ದಿನಗಳಲ್ಲಿ ಬಸ್, ಕಾರು ಹಾಗೂ ದ್ವಿಚಕ್ರ ವಾಹನಗಳಲ್ಲಿ ಬೆಂಕಿ ಕಾಣಿಸಿಕೊಳ್ಳುವ ಘಟನೆಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ವಾಹನಗಳ ನಿಯಮಿತ ತಪಾಸಣೆ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

Join WhatsApp

Join Now

Join Telegram

Join Now

Read more

ಕುಂದಾಪುರ: ವಿದ್ಯಾರಣ್ಯ ಕ್ಯಾಂಪಸ್ ಯಡಾಡಿ-ಮತ್ಯಾಡಿಯಲ್ಲಿ ಗುರುವಂದಾನ ಕಾರ್ಯಕ್ರಮ

ವಿದ್ಯಾರಣ್ಯ ಅಂಗಳದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ. ಕರಾವಳಿ ಸೊಗಡಿನ ವೇಷ ಭೂಷಣ,ಶಾಸ್ತ್ರ, ಸಂಪ್ರದಾಯಗಳ ವೈಭವದ ಮೆರವಣಿಗೆ

ಕೋಟ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ರಘು ಮಧ್ಯಸ್ಥ ಅವಿರೋಧ ಆಯ್ಕೆ

ಸುಜ್ಞಾನ ವಿದ್ಯಾ ಸಂಸ್ಥೆಯಲ್ಲಿ ‘ವಾಲ್ಬೆಲ್ಲ’ ಕುಂದಾಪ್ರ ಕನ್ನಡದ ಸಂಸ್ಕೃತಿ ಸಮಾರಂಭದ ಸಮಾರೋಪ: ಯುವಜನತೆ ದುಶ್ಚಟಗಳಿಂದ ದೂರವಿದ್ದು ಗುರಿಯತ್ತ ಸಾಗಬೇಕು – ಕೆ. ಜಯಪ್ರಕಾಶ್ ಹೆಗ್ಡೆ

ಸುಜ್ಞಾನದಂಗಳದಿ ವಾಲ್ಬೆಲ್ಲದ ಸವಿ ಸಂಭ್ರಮ: ಕುಂದಾಪ್ರ ಕನ್ನಡದ ಅಭಿವೃದ್ಧಿಗೆ ದಿಟ್ಟ ಹೆಜ್ಜೆ: ಕುಂದಾಪ್ರ ಕನ್ನಡದ ಸವಿ ಉಳಿಸಿ ಬೆಳಸುವ ಜವಾಬ್ದಾರಿ ನಮ್ಮದು.ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ

ವಿದ್ಯಾರಣ್ಯ ಶಾಲೆ ಯಡಾಡಿ – ಮತ್ಯಾಡಿಯಲ್ಲಿ ಜುಲೈ 6 ರಂದು ಕುಂದಾಪ್ರ ಕನ್ನಡ ‘ವಾಲ್ಪೆಲ್ಲ’ ಕಾರ್ಯಕ್ರಮ: ಕುಂದಾಪ್ರ ಕನ್ನಡದ ಅಭಿಮಾನ ಬೆಳೆಸಿ ಕೊಳ್ಳ ಬೇಕು – ಕೆ. ಜಯಪ್ರಕಾಶ್ ಹೆಗ್ಡೆ

Leave a Comment