ಸಾಲಿಗ್ರಾಮ: ಕಾರು – ಬೈಕ್ ಮುಖಾಮುಖಿ ಡಿಕ್ಕಿ ಸಾಲಿಗ್ರಾಮದ ಕೃಷಿಕ ಪರಮೇಶ್ವರ್ ಭಟ್ ಗಂಭಿರ

ಸಾಲಿಗ್ರಾಮ: ಕಾರು – ಬೈಕ್ ಮುಖಾಮುಖಿ ಡಿಕ್ಕಿ ಸಾಲಿಗ್ರಾಮದ ಕೃಷಿಕ ಪರಮೇಶ್ವರ್ ಭಟ್ ಗಂಭಿರ


ಸಾಲಿಗ್ರಾಮ: ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನ ಎದುರು ಭಾನುವಾರ ಸಂಜೆ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬಸ್ರೂರು ಮೂಲದ ಅಕ್ಷಯ್ ಭಂಡಾರಿಯವರ ಕಾರು ಮಂಗಳೂರಿಗೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಿ ವಾಪಾಸ್ ಬರುವಾಗ ಬೈಕ್ ಅಡ್ಡ ಬಂದ ಪರಿಣಾಮ ಅಪಘಾತ ಸಂಭವಿಸಿದೆ.

ಬೈಕ್ ಸವಾರರಾದ ಪರಮೇಶ್ವರ್ ಭಟ್ ಇವರು ಮನೆಯಿಂದ ಸರ್ವಿಸ್ ರಸ್ತೆ ಮೂಲಕ ಸಾಲಿಗ್ರಾಮ ಪೇಟೆಗೆ ತೆರಳುವಾಗ ಕಾರು ಗುದ್ದಿದ ಪರಿಣಾಮ ಅಡ್ಡಲಾಗಿ ರಸ್ತೆಗೆ ಬಿದ್ದ ಪರಿಣಾಮ ಕಾಲಿಗೆ ಬಲವಾದ ಪೆಟ್ಟು ಬಿದ್ದಿದೆ.

ಅವೈಜ್ಞಾನಿಕವಾದ ಈ ಸರ್ಕಲ್ ಡೇಂಜರ್ ವಿಭಾಗವಾಗಿ ಗುರುತಿಸಲಾಗಿದ್ದು, ಈ ಹಿಂದೆಯೂ ಅನೇಕ ಸಾವು ನೋವು ಸಂಭವಿಸಿದೆ. ಆದರೆ ಇದುವರೆಗೂ ಹೆದ್ದಾರಿ ಪ್ರಾಧಿಕಾರವಾಗಲಿ ಅಥವಾ ನವಯುಗ ಕಂಪನಿ ಯಾವುದೇ ಪರಿಹಾರ ಕ್ರಮ ಕೈ ಗೊಂಡಿಲ್ಲ. ಅಪಘಾತ ನಡೆದಾಗ ವಾಹನ ತೆರವು ಗೊಳಿಸುವ ಟೋಯಿಂಗ್ ವಾಹನ ಕೂಡ ನವಯುಗ ಕಂಪನಿ ಒದಗಿಸುತ್ತಿಲ್ಲ.

ಇಂತಹ ಸಂದರ್ಭದಲ್ಲಿ ಸ್ಥಳೀಯರೇ ವಾಹನ ದೂಡಿಕೊಂಡು ಬದಿಗೆ ಸರಿಸಬೇಕಾಗಿದೆ. ಇಂದು ಕೂಡ ಸ್ಥಳೀಯರು ಗಾಯಳುವನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿ ವಾಹನಗಳನ್ನು ಬದಿಗಿರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.

Join WhatsApp

Join Now

Join Telegram

Join Now

Read more

ಕುಂದಾಪುರ: ವಿದ್ಯಾರಣ್ಯ ಕ್ಯಾಂಪಸ್ ಯಡಾಡಿ-ಮತ್ಯಾಡಿಯಲ್ಲಿ ಗುರುವಂದಾನ ಕಾರ್ಯಕ್ರಮ

ವಿದ್ಯಾರಣ್ಯ ಅಂಗಳದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ. ಕರಾವಳಿ ಸೊಗಡಿನ ವೇಷ ಭೂಷಣ,ಶಾಸ್ತ್ರ, ಸಂಪ್ರದಾಯಗಳ ವೈಭವದ ಮೆರವಣಿಗೆ

ಕೋಟ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ರಘು ಮಧ್ಯಸ್ಥ ಅವಿರೋಧ ಆಯ್ಕೆ

ಸುಜ್ಞಾನ ವಿದ್ಯಾ ಸಂಸ್ಥೆಯಲ್ಲಿ ‘ವಾಲ್ಬೆಲ್ಲ’ ಕುಂದಾಪ್ರ ಕನ್ನಡದ ಸಂಸ್ಕೃತಿ ಸಮಾರಂಭದ ಸಮಾರೋಪ: ಯುವಜನತೆ ದುಶ್ಚಟಗಳಿಂದ ದೂರವಿದ್ದು ಗುರಿಯತ್ತ ಸಾಗಬೇಕು – ಕೆ. ಜಯಪ್ರಕಾಶ್ ಹೆಗ್ಡೆ

ಸುಜ್ಞಾನದಂಗಳದಿ ವಾಲ್ಬೆಲ್ಲದ ಸವಿ ಸಂಭ್ರಮ: ಕುಂದಾಪ್ರ ಕನ್ನಡದ ಅಭಿವೃದ್ಧಿಗೆ ದಿಟ್ಟ ಹೆಜ್ಜೆ: ಕುಂದಾಪ್ರ ಕನ್ನಡದ ಸವಿ ಉಳಿಸಿ ಬೆಳಸುವ ಜವಾಬ್ದಾರಿ ನಮ್ಮದು.ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ

ವಿದ್ಯಾರಣ್ಯ ಶಾಲೆ ಯಡಾಡಿ – ಮತ್ಯಾಡಿಯಲ್ಲಿ ಜುಲೈ 6 ರಂದು ಕುಂದಾಪ್ರ ಕನ್ನಡ ‘ವಾಲ್ಪೆಲ್ಲ’ ಕಾರ್ಯಕ್ರಮ: ಕುಂದಾಪ್ರ ಕನ್ನಡದ ಅಭಿಮಾನ ಬೆಳೆಸಿ ಕೊಳ್ಳ ಬೇಕು – ಕೆ. ಜಯಪ್ರಕಾಶ್ ಹೆಗ್ಡೆ

Leave a Comment