ಕುಂದಾಪುರ: ದ್ವಿತೀಯ PUC ಫಲಿತಾಂಶದಲ್ಲಿ ಸುಣ್ಣಾರಿ ಎಕ್ಸಲೆಂಟ್ ವಿದ್ಯಾರ್ಥಿಗಳ ಅಮೋಘ ಸಾಧನೆ. ಆಡಳಿತ ಮಂಡಳಿ ಮತ್ತು ಪೋಷಕರ ಸಂಭ್ರಮ.

ಕುಂದಾಪುರ : ರಾಜ್ಯಮಟ್ಟದಲ್ಲಿ 9 ರ‍್ಯಾಂಕ್ ಪಡೆದು ಕೊಳ್ಳುವ ಮೂಲಕ ನಮ್ಮ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನಿರಂತರ ಶೈಕ್ಷಣಿಕ ಮೇಲುಗೈ ಸಾಧಿಸಿದ್ದಾರೆ ಎಂದು,ಎಂ. ಎಂ. ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆ ಪತ್ರಿಕಾಗೋಷ್ಠಿಯಲ್ಲಿ ಸಂತಸ ವ್ಯಕ್ತಪಡಿಸಿದರು.

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಮಾನ್ಯ ಶೆಟ್ಟಿ ಇವರು ವಿಜ್ಞಾನ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆದು ಉಡುಪಿ ಜಿಲ್ಲೆಗೆ ಹಾಗೂ ನಮ್ಮ ಎಕ್ಸಲೆಂಟ್ ವಿದ್ಯಾ ಸಂಸ್ಥೆಗೆ, ಇಲ್ಲಿನ ಭೋದಕ ವರ್ಗದವರಿಗೂ ಹಾಗೂ ಪೋಷಕರಿಗೂ ಹೆಮ್ಮೆ ತಂದು ಕೊಟ್ಟಿದ್ದಾರೆ. ಇವರ ಮುಂದಿನ ಉನ್ನತ ಶಿಕ್ಷಣಕ್ಕೆ ನಮ್ಮ ಸಂಸ್ಥೆ ಬೆನ್ನೆಲುಬಾಗಿ ನಿಲ್ಲಲಿದೆ.ಮಾನ್ಯ ಶೆಟ್ಟಿ ಇವರ ತಾಯಿ ಸಾಮಾನ್ಯ ಗ್ರಹಿಣಿಯಾಗಿದ್ದು ತಂದೆ ಹೋಟೆಲ್ ನೌಕರರಾಗಿದ್ದರು, ದಿನನಿತ್ಯ ಮನೆಯಿಂದ ಶಾಲೆಗೆ ನಡೆದು ಕೊಂಡು ಬಂದು ತರಗತಿಯಲ್ಲಿ ಪಾಲ್ಗೊಳ್ಳುತ್ತಿದ್ದರು.

ವಿಶೇಷವಾಗಿ ಯಾವುದೇ ಪ್ರತ್ಯೇಕ ತರಬೇತಿ ಇಲ್ಲದೆ ನಮ್ಮ ಸಂಸ್ಥೆಯ ಶಿಕ್ಷಣ ವ್ಯವಸ್ಥೆಯಡಿಯಲ್ಲಿ ಈ ಸಾಧನೆ ಮಾಡಿದ್ದು ನಮ್ಮ ಶಿಕ್ಷಣ ಸಂಸ್ಥೆಗೆ ದೊಡ್ಡ ಗೌರವ ಎಂದು ಕೊಂಡಾಡಿದರು.

ರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ, ಶಿಕ್ಷಣ, ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲೂ ಎಕ್ಸಲೆಂಟ್ ಪ್ರಬಲ.ಪ್ರಾಂಶುಪಾಲ ನಾಗರಾಜ್ ಶೆಟ್ಟಿ.

ನಮ್ಮ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಮಹೇಶ್ ಹೆಗ್ಡೆ ಕ್ರೀಡಾಪಟುವಾಗಿದ್ದು, ಈ ದಿಸೆಯಲ್ಲಿ 2 ಎಕರೆ ಜಾಗ ಖರೀದಿ ಮಾಡಿ ಅತ್ತ್ಯುತ್ತಮ ದರ್ಜೆಯ ಕ್ರೀಡಾಂಗಣ ಮಾಡುವ ಯೋಜನೆ ಮಾಡಿರುತ್ತಾರೆ ಎಂದು ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಹೇಳಿದರು.
JEE : 21 ವಿದ್ಯಾರ್ಥಿಗಳು 90 ರಿಂದ 98 ಪರ್ಸೆಂಟ್ ಗಳಿಸಿರುತ್ತಾರೆ.
CS ಫೌಂಡೇಶನ್ : 24 ವಿದ್ಯಾರ್ಥಿಗಳಲ್ಲಿ 21 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. CET & NEET ಪರೀಕ್ಷೆಗಳಲ್ಲೂ ಕೂಡ ಉತ್ತಮ ಸಾಧನೆ ಮಾಡಿ ವಿದ್ಯಾ ಸಂಸ್ಥೆಗೆ ಮತ್ತು ಇಲ್ಲಿನ ಭೋಧಕರಿಗೆ ಗೌರವ ತಂದಿರುತ್ತಾರೆ ಎಂದರು.
ಕರೋನ ನಂತರವೂ ಉತ್ತಮ ಫಲಿತಾಂಶ ನಮ್ಮ ವಿದ್ಯಾ ಸಂಸ್ಥೆಯಿಂದ ಹೊರಹೋಮ್ಮತ್ತಿದೆ.PUC ಫಲಿತಾಂಶದಲ್ಲಿ 2025 ರಲ್ಲಿ ರಾಜ್ಯಕ್ಕೆ ಐದನೇ ಸ್ಥಾನ 2026 ರಲ್ಲಿ ಮುಂದಿನ ವರ್ಷ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಮತ್ತೆ ನಮ್ಮ ವಿದ್ಯಾ ಸಂಸ್ಥೆಗೆ ಹೆಮ್ಮೆ ತರುವ ಜವಾಬ್ದಾರಿಯುತವಾದ ಭೋದನೆ ಮಾಡಲು ನಮ್ಮ ಶಿಕ್ಷಕರು ಪ್ರಯತ್ನಿಸಿಲಿದ್ದಾರೆ ಎಂದರು.
ಎಂ ಎಂ ಹೆಗ್ಡೆ ಚಾರಿಟೇಬಲ್ಮತ್ತು ಎಜುಕೇಷನ್ ಟ್ರಸ್ಟ್ ಅಧ್ಯಕ್ಷರಾದ ಮಹೇಶ್ ಹೆಗ್ಡೆ, ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ, ಉಪನ್ಯಾಸಕರು, ಮಾನ್ಯ ಶೆಟ್ಟಿ ಮತ್ತು ಮಾನ್ಯ ಶೆಟ್ಟಿ ಪೋಷಕರು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now

Read more

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment