ಕಲುಷಿತ ಕುಡಿಯುವ ನೀರು ಪೂರೈಸುತ್ತಿದ್ದ ಹೊಂಬಾಡಿ ಮಂಡಾಡಿ ಗ್ರಾ. ಪಂ. – ಬೆಚ್ಚಿಬಿದ್ದ ಬಳಕೆದಾರರು!

ಡೈಲಿ ವಾರ್ತೆ:JAN/16/2026

ಕಲುಷಿತ ಕುಡಿಯುವ ನೀರು ಪೂರೈಸುತ್ತಿದ್ದ ಹೊಂಬಾಡಿ ಮಂಡಾಡಿ ಗ್ರಾ. ಪಂ. – ಬೆಚ್ಚಿಬಿದ್ದ ಬಳಕೆದಾರರು!

ಕುಂದಾಪುರ| ಕಳೆದೆರಡು ವರ್ಷಗಳಿಂದ ಕುಡಿಯಲು ಕಲುಷಿತ ಗೊಂಡಿರುವ ನದಿಯ ನೀರನ್ನು ಗ್ರಾಮಸ್ತರಿಗೆ ಪೂರೈಸುತ್ತಿದ್ದ ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯಿತಿನ ಅಮಾನವೀಯ ಕೃತ್ಯಕ್ಕೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.

ಹೊಂಬಾಡಿ ಮಂಡಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಣ್ಸೆಮಕ್ಕಿಯ ಯಡಾಡಿ ಹಾಗೂ ಮತ್ಯಾಡಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಗಂಭೀರವಾಗಿ ಮುಂದುವರಿದಿದೆ. ಪ್ರಧಾನಮಂತ್ರಿ ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮದ ಮೂರು ಕಡೆ ಓವರ್‌ಹೆಡ್ ಟ್ಯಾಂಕ್‌ಗಳನ್ನು ನಿರ್ಮಿಸಲಾಗಿತ್ತು. ಆದರೆ ಟ್ಯಾಂಕ್‌ಗಳಿಗೆ ನೀರು ಪೂರೈಸಲು ಗುಡ್ಡಟ್ಟು ಸೇತುವೆ ಸಮೀಪ ಅವೈಜ್ಞಾನಿಕ ವಾಗಿ ತೋಡಲಾದ ಬಾವಿಯಲ್ಲಿ ಹನಿ ನೀರು ಸಿಗದೇ, ಮೈ ಪರಚಿ ಕೊಂಡ ಅಧಿಕಾರಿಗಳ ದೃಷ್ಟಿ ಅನತಿ ದೂರದಲ್ಲಿ ಕಿರು ಅಣೆಕಟ್ಟು ಮೂಲಕ ಹೊಳೆಯಲ್ಲಿ ಸಂಗ್ರಹವಾಗಿದ್ದ ಮಲಿನ ನೀರಿನ ಮೇಲೆ ಹರಿದಿತ್ತು. ಈ ಹಿನ್ನೆಲೆಯಲ್ಲಿ ಪಂಚಾಯತ್‌ ವತಿಯಿಂದ 5 ಹೆಚ್.ಪಿ ಮೋಟಾರ್ ಅನ್ನು ನೇರವಾಗಿ ಹೊಳೆಗೆ ಅಳವಡಿಸಿ, ಅದರಿಂದ ಬಾವಿಗೆ ನೀರು ತುಂಬಿಸಿ, ಬಳಿಕ 10 ಹೆಚ್.ಪಿ ಮೋಟಾರ್ ಮೂಲಕ ಟ್ಯಾಂಕ್‌ಗಳಿಗೆ ನೀರು ಪೂರೈಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಈ ವಿಧಾನದಿಂದ ಕಳೆದ 1ರಿಂದ 2 ವರ್ಷಗಳ ಕಾಲ ಗ್ರಾಮಸ್ಥರಿಗೆ ಹೊಳೆಯ ಮಲೀನ ನೀರನ್ನೇ ಕುಡಿಯಲು ಪೂರೈಸಲಾಗಿದೆ ಎನ್ನುವುದು ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.
ಈ ವಿಚಾರವನ್ನು ಗಮಿಸಿದ ಸಮಾಜ ಸೇವಕ ರವಿ ಮೊಗವೀರ ಗುಡ್ಡಟ್ಟು ಅವರು ಪಂಚಾಯತ್ ಸದಸ್ಯರ ಸಭೆಯಲ್ಲಿ ಅದೇ ನೀರನ್ನು ತಂದು ಪ್ರದರ್ಶಿಸಿ ಆಕ್ಷೇಪ ಎತ್ತಿದ್ದಾರೆ. ಈ ವೇಳೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಧೂಸೂಧನ್ ಅವರು ಎರಡು ದಿನಗಳ ಸಮಯಾವಕಾಶ ಕೇಳಿ, ಸ್ಥಳ ಪರಿಶೀಲನೆ ನಡೆಸಿ ಶಾಶ್ವತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

ಕುಡಿಯುವ ನೀರು ನಮ್ಮ ಮೂಲಭೂತ ಹಕ್ಕು ಎಂಬುದನ್ನು ಉಲ್ಲೇಖಿಸಿದ ಗ್ರಾಮಸ್ಥರು, ಶಾಶ್ವತ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲವಾದರೆ ಮುಂದಿನ ದಿನಗಳಲ್ಲಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹೋರಾಟಕ್ಕೆ ಸಾರ್ವಜನಿಕರ ಸಹಕಾರ ಮತ್ತು ಬೆಂಬಲ ಅಗತ್ಯವೆಂದು ಅವರು ಮನವಿ ಮಾಡಿದ್ದಾರೆ.

 

Join WhatsApp

Join Now

Join Telegram

Join Now

Read more

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment