ಕೋಡಿಯಲ್ಲಿ ನಿರ್ಗತಿಕ ತಾಯಿ, ಮಕ್ಕಳಿಗೆ ಪೊಲೀಸ್ ನೆರವು: ಗಂಗೊಳ್ಳಿ ಕರಾವಳಿ ಕಾವಲು ತಂಡದ ಮಾನವೀಯತೆ ಮೆರಗು

On: February 13, 2026 9:17 AM
Follow Us:

ಕೋಡಿಯಲ್ಲಿ ನಿರ್ಗತಿಕ ತಾಯಿ, ಮಕ್ಕಳಿಗೆ ಪೊಲೀಸ್ ನೆರವು: ಗಂಗೊಳ್ಳಿ ಕರಾವಳಿ ಕಾವಲು ತಂಡದ ಮಾನವೀಯತೆ ಮೆರಗು


ಕುಂದಾಪುರ: ಉಡುಪಿ ಜಿಲ್ಲೆ, ಕುಂದಾಪುರ ತಾಲೂಕಿನ ಕೋಡಿ ಗ್ರಾಮದ ಕೋಡಿ ಸೀವಾಕ್ ಸಮೀಪದ (Seevak Resto Cafe) ಬಳಿಯಲ್ಲಿ ಫೆ.12 ರಂದು ಒಬ್ಬ ಮಹಿಳೆ ತನ್ನ ಮೂರು ಚಿಕ್ಕ ಮಕ್ಕಳೊಂದಿಗೆ ದುಃಖಿತ ಸ್ಥಿತಿಯಲ್ಲಿ ನಿಂತಿರುವುದನ್ನು ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಪಿಎಸ್‌ಐ ಮುಕ್ತ ಬಾಯಿ ಹಾಗೂ ಕೋಡಿ ಬೀಟ್ ಸಿಬ್ಬಂದಿ ಎಚ್‌ಸಿ 1746 ಗೋಪಾಲ ಖಾರ್ವಿ ಅವರು ರೌಂಡ್ಸ್ ಕರ್ತವ್ಯದ ವೇಳೆ ಗಮನಿಸಿದರು.

ತಕ್ಷಣವೇ ಮಾನವೀಯತೆ ತೋರಿದ ಪೊಲೀಸ್ ಸಿಬ್ಬಂದಿ ಮಹಿಳೆಯನ್ನು ವಿಚಾರಣೆ ನಡೆಸಿದಾಗ, ಆಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಂಗನಹಳ್ಳಿ ಸ್ಲಂ ನಿವಾಸಿ ಸಂಗೀತ (27), ಗಂಡ ಬದ್ರೇಶ್ ಎಂದು ತಿಳಿದುಬಂದಿದೆ.
ಆಕೆಯ ಜೊತೆಗೆ ಮೂವರು ಮಕ್ಕಳಾದ ಅಜಯ (9), ಖುಷಿ (8) ಮತ್ತು ರೋಜಾ (5) ಇದ್ದರು.

ಕುಟುಂಬದಲ್ಲಿ ದಿಕ್ಕು ದೆಸೆ ಇಲ್ಲದೆ ನಿರ್ಗತಿಕರಾಗಿ ಅಲೆಮಾರಿ ಜೀವನ ನಡೆಸುತ್ತಿದ್ದ ಸಂಗೀತ ಅವರು, ತನ್ನ ಹಾಗೂ ಮಕ್ಕಳ ಭವಿಷ್ಯಕ್ಕಾಗಿ, ವಿಶೇಷವಾಗಿ ಮಕ್ಕಳ ವಿದ್ಯಾಭ್ಯಾಸದ ಉದ್ದೇಶದಿಂದ ಸಹಾಯಕ್ಕಾಗಿ ಅಲೆದಾಡುತ್ತಿರುವುದಾಗಿ ತಿಳಿಸಿದರು.

ಮಹಿಳೆಯ ಪರಿಸ್ಥಿತಿಯನ್ನು ಮನಗಂಡ ಪೊಲೀಸ್ ಅಧಿಕಾರಿಗಳು ಅಗತ್ಯ ನೆರವು ನೀಡುವ ಕ್ರಮ ಕೈಗೊಂಡಿದ್ದು, ಸಂಬಂಧಿಸಿದ ಇಲಾಖೆಗಳೊಂದಿಗೆ ಸಂಪರ್ಕ ಸಾಧಿಸಿ ಸೂಕ್ತ ಆಶ್ರಯ ಹಾಗೂ ಸಹಾಯ ಒದಗಿಸಲು ಮುಂದಾಗಿದ್ದಾರೆ.

ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಸಿಬ್ಬಂದಿಗಳ ಈ ಮಾನವೀಯ ನಡೆ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ. ಪೊಲೀಸ್ ಇಲಾಖೆಯು ಕೇವಲ ಕಾನೂನು ಸುವ್ಯವಸ್ಥೆ ಕಾಪಾಡುವುದಲ್ಲದೆ, ಸಂಕಷ್ಟದಲ್ಲಿರುವವರಿಗೂ ನೆರವಾಗುತ್ತಿದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆಯಾಗಿದೆ.

Join WhatsApp

Join Now

Join Telegram

Join Now

Read more

ಅಮಾಸೆಬೈಲಿನಲ್ಲಿ 14 ಕೊರಗ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ: ಸಮಾಜ ಸೇವೆಯಲ್ಲಿ ಎಚ್. ಎಸ್. ಆರ್. ಶೆಟ್ಟಿಯವರ ಮಹತ್ವಾಕಾಂಕ್ಷಿ ಹೆಜ್ಜೆ – ಪೇಜಾವರ ಶ್ರೀ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವಿನಿಂದ 205 ಶಾಲೆಗಳಿಗೆ ಬೆಂಚ್-ಡೆಸ್ಕ್ ವಿತರಣೆ: ಹೊನ್ನವಳ್ಳಿಯಲ್ಲಿ ಸಚಿವ ವಿ.ಸೋಮಣ್ಣರಿಂದ ಹಸ್ತಾಂತರ

ಸಾಲಿಗ್ರಾಮದಲ್ಲಿ ರಿಯಲ್ ಸ್ಟಾರ್ ಉಪೇಂದ್ರರ ಮಹಾಪೂಜೆ : ಕುಟುಂಬ ಸಮೇತ ಶ್ರೀ ಗುರುನರಸಿಂಹ ಸ್ವಾಮಿಗೆ ವಿಶೇಷ ಸೇವೆ

ಪ್ರಕೃತಿ ಮಡಿಲಿನಲ್ಲಿ ನಾಯಕತ್ವದ ಪಾಠ: ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಸ್ಕೌಟ್ಸ್ ದಿನಾಚರಣೆ: ಸೌಹಾರ್ದಿತ ವಾತಾವರಣ ನಿರ್ಮಾಣವೇ ಸ್ಕೌಟ್ಸ್ & ಗೈಡ್ಸ್ ಮೂಲ ಉದ್ದೇಶ. ಇಂದ್ರಾಳಿ ಜಯಕರ್ ಶೆಟ್ಟಿ

ವಿದ್ಯಾರಣ್ಯ ಶಿಶು ವಿಹಾರದಲ್ಲಿ ಪದವಿ ಪ್ರದಾನ: ಆತ್ಮವಿಶ್ವಾಸ ಹೆಚ್ಚಿಸುವ ಶಿಕ್ಷಣ ಅಗತ್ಯ. ಕಾಂತರ ಕಮಲ ಖ್ಯಾತಿಯ ಮಾನಸಿ ಸುಧೀರ್.

ಪುನರ್ಜನ್ಮ ಪಡೆದ ‘ಯಕ್ಷ ಚಂದ್ರಿಕೆ’: ಮಂದಾರ್ತಿ ರಥೋತ್ಸವದಲ್ಲಿ ಮತ್ತೆ ಗೆಜ್ಜೆ ಕಟ್ಟಿದ ಶಶಿಕಾಂತ್ ಶೆಟ್ಟಿ!

Leave a Comment