ಕೋಡಿಯಲ್ಲಿ ನಿರ್ಗತಿಕ ತಾಯಿ, ಮಕ್ಕಳಿಗೆ ಪೊಲೀಸ್ ನೆರವು: ಗಂಗೊಳ್ಳಿ ಕರಾವಳಿ ಕಾವಲು ತಂಡದ ಮಾನವೀಯತೆ ಮೆರಗು

ಕೋಡಿಯಲ್ಲಿ ನಿರ್ಗತಿಕ ತಾಯಿ, ಮಕ್ಕಳಿಗೆ ಪೊಲೀಸ್ ನೆರವು: ಗಂಗೊಳ್ಳಿ ಕರಾವಳಿ ಕಾವಲು ತಂಡದ ಮಾನವೀಯತೆ ಮೆರಗು


ಕುಂದಾಪುರ: ಉಡುಪಿ ಜಿಲ್ಲೆ, ಕುಂದಾಪುರ ತಾಲೂಕಿನ ಕೋಡಿ ಗ್ರಾಮದ ಕೋಡಿ ಸೀವಾಕ್ ಸಮೀಪದ (Seevak Resto Cafe) ಬಳಿಯಲ್ಲಿ ಫೆ.12 ರಂದು ಒಬ್ಬ ಮಹಿಳೆ ತನ್ನ ಮೂರು ಚಿಕ್ಕ ಮಕ್ಕಳೊಂದಿಗೆ ದುಃಖಿತ ಸ್ಥಿತಿಯಲ್ಲಿ ನಿಂತಿರುವುದನ್ನು ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಪಿಎಸ್‌ಐ ಮುಕ್ತ ಬಾಯಿ ಹಾಗೂ ಕೋಡಿ ಬೀಟ್ ಸಿಬ್ಬಂದಿ ಎಚ್‌ಸಿ 1746 ಗೋಪಾಲ ಖಾರ್ವಿ ಅವರು ರೌಂಡ್ಸ್ ಕರ್ತವ್ಯದ ವೇಳೆ ಗಮನಿಸಿದರು.

ತಕ್ಷಣವೇ ಮಾನವೀಯತೆ ತೋರಿದ ಪೊಲೀಸ್ ಸಿಬ್ಬಂದಿ ಮಹಿಳೆಯನ್ನು ವಿಚಾರಣೆ ನಡೆಸಿದಾಗ, ಆಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಂಗನಹಳ್ಳಿ ಸ್ಲಂ ನಿವಾಸಿ ಸಂಗೀತ (27), ಗಂಡ ಬದ್ರೇಶ್ ಎಂದು ತಿಳಿದುಬಂದಿದೆ.
ಆಕೆಯ ಜೊತೆಗೆ ಮೂವರು ಮಕ್ಕಳಾದ ಅಜಯ (9), ಖುಷಿ (8) ಮತ್ತು ರೋಜಾ (5) ಇದ್ದರು.

ಕುಟುಂಬದಲ್ಲಿ ದಿಕ್ಕು ದೆಸೆ ಇಲ್ಲದೆ ನಿರ್ಗತಿಕರಾಗಿ ಅಲೆಮಾರಿ ಜೀವನ ನಡೆಸುತ್ತಿದ್ದ ಸಂಗೀತ ಅವರು, ತನ್ನ ಹಾಗೂ ಮಕ್ಕಳ ಭವಿಷ್ಯಕ್ಕಾಗಿ, ವಿಶೇಷವಾಗಿ ಮಕ್ಕಳ ವಿದ್ಯಾಭ್ಯಾಸದ ಉದ್ದೇಶದಿಂದ ಸಹಾಯಕ್ಕಾಗಿ ಅಲೆದಾಡುತ್ತಿರುವುದಾಗಿ ತಿಳಿಸಿದರು.

ಮಹಿಳೆಯ ಪರಿಸ್ಥಿತಿಯನ್ನು ಮನಗಂಡ ಪೊಲೀಸ್ ಅಧಿಕಾರಿಗಳು ಅಗತ್ಯ ನೆರವು ನೀಡುವ ಕ್ರಮ ಕೈಗೊಂಡಿದ್ದು, ಸಂಬಂಧಿಸಿದ ಇಲಾಖೆಗಳೊಂದಿಗೆ ಸಂಪರ್ಕ ಸಾಧಿಸಿ ಸೂಕ್ತ ಆಶ್ರಯ ಹಾಗೂ ಸಹಾಯ ಒದಗಿಸಲು ಮುಂದಾಗಿದ್ದಾರೆ.

ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಸಿಬ್ಬಂದಿಗಳ ಈ ಮಾನವೀಯ ನಡೆ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ. ಪೊಲೀಸ್ ಇಲಾಖೆಯು ಕೇವಲ ಕಾನೂನು ಸುವ್ಯವಸ್ಥೆ ಕಾಪಾಡುವುದಲ್ಲದೆ, ಸಂಕಷ್ಟದಲ್ಲಿರುವವರಿಗೂ ನೆರವಾಗುತ್ತಿದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆಯಾಗಿದೆ.

Join WhatsApp

Join Now

Join Telegram

Join Now

Read more

ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹5 ಲಕ್ಷ ಅನುದಾನ ಮಂಜೂರು; ಅಜಿತ್ ಕುಮಾರ್ ಶೆಟ್ಟಿ ಮನವಿಗೆ ಸಚಿವ ರಾಮಲಿಂಗ ರೆಡ್ಡಿ ಸ್ಪಂದನೆ

ಉಡುಪಿ: ಬೈಂದೂರು ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಮರಳಿ ಆರೋಗ್ಯ ಇಲಾಖೆಗೆ. ತತ್ ಕ್ಷಣ ಜಾರಿಗೆ ಆದೇಶ.

ಸುಜ್ಞಾನದಂಗಳದಲ್ಲಿ ಮಂಥನ-2026 ಬೇಸಿಗೆ ಶಿಬಿರ ಶುಭಾರಂಭ: ಮಕ್ಕಳಲ್ಲಿರುವ ಪ್ರತಿಭೆಗನುಗುಣವಾಗಿ ಪೋಷಕರ ಪ್ರೋತ್ಸಾಹ ಅಗತ್ಯ – ಜಯಪ್ರಕಾಶ್ ಹೆಗ್ಡೆ

ಸಿದ್ದಾಪುರ: ಜ್ಞಾನ ಸರಸ್ವತಿ ಶಿಕ್ಷಣ ಸಂಸ್ಥೆಗೆ SSLC ಯಲ್ಲಿ 100 ಫಲಿತಾಂಶ. ಸಾಧನೆಗೈದ ವಿದ್ಯಾರ್ಥಿನಿಗೆ 25 ಸಾವಿರ ಪ್ರೋತ್ಸಾಹ ಧನ

ಬ್ರಹ್ಮಾವರ: ಭಕ್ತಿ ಭಾವದ ಸಿರಿ ಸಿಂಗಾರ ಕೋಲಾ ಸೇವೆ : ಸುಗ್ಗಿ ಸುಧಾಕರ್ ಶೆಟ್ಟಿ ನಿವಾಸದಲ್ಲಿ ಕೇಮಾರು ಈಶ ವಿಠಲ ಸ್ವಾಮೀಜಿ ಹಾಗೂ ಗಣ್ಯರ ಉಪಸ್ಥಿತಿ

ಸುಣ್ಣಾರಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ‘ಬೆಸುಗೆ-2026’ ಬೇಸಿಗೆ ಶಿಬಿರಕ್ಕೆ ಚಾಲನೆ: ​ಸೃಜನಾತ್ಮಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಚೆಸ್ ಕ್ರೀಡಾಪಟು ಆರಾಧ್ಯ ಶೆಟ್ಟಿ

Leave a Comment