ಸಾಲಿಗ್ರಾಮ ಶ್ರೀಗುರುನರಸಿಂಹ ದೇವಳ ಆಡಳಿತ ಮಂಡಳಿ ಚುನಾವಣೆ: ವಿವಿಧ ಕ್ಷೇತ್ರಗಳಿಂದ 8 ಮಂದಿ ಬಹುಮತದಿಂದ ಆಯ್ಕೆ

ಸಾಲಿಗ್ರಾಮ ಶ್ರೀಗುರುನರಸಿಂಹ ದೇವಳ ಆಡಳಿತ ಮಂಡಳಿ ಚುನಾವಣೆ: ವಿವಿಧ ಕ್ಷೇತ್ರಗಳಿಂದ 8 ಮಂದಿ ಬಹುಮತದಿಂದ ಆಯ್ಕೆ


ಸಾಲಿಗ್ರಾಮ: ಸಾಲಿಗ್ರಾಮದ ಶ್ರೀಗುರುನರಸಿಂಹ ದೇವಳದ 2026–31ನೇ ಸಾಲಿನ ಆಡಳಿತ ಮಂಡಳಿಗೆ ಮಾರ್ಚ್ 15ರಂದು ಚುನಾವಣೆ ನಡೆಯಿತು. ಒಟ್ಟು ಆರು ಮತಕ್ಷೇತ್ರಗಳಲ್ಲಿ ಚುನಾವಣಾ ಪ್ರಕ್ರಿಯೆ ನಡೆದಿದ್ದು, ಕರ್ನಾಟಕೇತರ ಭಾರತದ ಇತರ ರಾಜ್ಯಗಳ ಮತಕ್ಷೇತ್ರದಿಂದ ಎಂ. ಲಕ್ಷ್ಮೀನಾರಾಯಣ ಹೊಳ್ಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಳಿದ ಐದು ಮತಕ್ಷೇತ್ರಗಳಿಗೆ ಇಂದು ಮತದಾನ ನಡೆಯಿತು. ಈ ಐದು ಕ್ಷೇತ್ರಗಳಿಂದ ಒಟ್ಟು 8 ಮಂದಿ ಸದಸ್ಯರನ್ನು ಆಯ್ಕೆ ಮಾಡಬೇಕಾಗಿದ್ದು, ಮತದಾರರು ಉತ್ಸಾಹದಿಂದ ಮತ ಚಲಾಯಿಸಿದರು.

ಉಡುಪಿ ಜಿಲ್ಲೆಯ ಉಳಿದ ಭಾಗಗಳ ಮತಕ್ಷೇತ್ರದಿಂದ ಬೈಂದೂರಿನ ಬಿ. ಚಂದ್ರಶೇಖರ ನಾವಡ ಅವರು ಬಹುಮತದಿಂದ ಆಯ್ಕೆಯಾಗಿದ್ದಾರೆ.

ಬೆಂಗಳೂರು ಕಾರ್ಪೊರೇಷನ್ ಮತಕ್ಷೇತ್ರದಿಂದ ಜಿ. ಪ್ರಕಾಶ ಮಯ್ಯ ಅವರು ಬಹುಮತದಿಂದ ಗೆಲುವು ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮತಕ್ಷೇತ್ರದಿಂದ ಪ್ರಕಾಶ ಕಾರಂತ ಅವರು ಆಯ್ಕೆಯಾಗಿದ್ದು, ಕರ್ನಾಟಕದ ಉಳಿದ ಭಾಗಗಳ ಮತಕ್ಷೇತ್ರದಿಂದ ಬಿ.ಜಿ. ಕೃಷ್ಣಮೂರ್ತಿ ಅವರು ಬಹುಮತದಿಂದ ಜಯಗಳಿಸಿದ್ದಾರೆ.

ಇದಲ್ಲದೆ ಸಾಲಿಗ್ರಾಮ ಮತಕ್ಷೇತ್ರದಿಂದ ಪ್ರಸನ್ನ ತುಂಗ, ಪರಶುರಾಮ ಭಟ್ಟ, ಕೆ. ತಾರಾನಾಥ ಹೊಳ್ಳ ಹಾಗೂ ಚಂದ್ರಶೇಖರ ಉಪಾಧ್ಯ ಅವರುಗಳು ಬಹುಮತದಿಂದ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದ್ದು, ಆಯ್ಕೆಯಾದ ಸದಸ್ಯರಿಗೆ ಭಕ್ತರು ಮತ್ತು ಸ್ಥಳೀಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Join WhatsApp

Join Now

Join Telegram

Join Now

Read more

ಕುಂದಾಪುರ: ಸುಜ್ಞಾನ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಗೆ 9ನೇ ರ‍್ಯಾಂಕ್ – ಆಡಳಿತ ಮಂಡಳಿಯಿಂದ 50 ಸಾವಿರ ನಗದು ಪುರಸ್ಕಾರ

ಕುಂದಾಪುರ: ದ್ವಿತೀಯ PUC ಫಲಿತಾಂಶದಲ್ಲಿ ಸುಣ್ಣಾರಿ ಎಕ್ಸಲೆಂಟ್ ವಿದ್ಯಾರ್ಥಿಗಳ ಅಮೋಘ ಸಾಧನೆ. ಆಡಳಿತ ಮಂಡಳಿ ಮತ್ತು ಪೋಷಕರ ಸಂಭ್ರಮ.

ಎಕ್ಸಲೆಂಟ್ ಕಾಲೇಜು, ಸುಣ್ಣಾರಿ, ಕುಂದಾಪುರ: “ರಾಜ್ಯದಲ್ಲಿ ಅತ್ಯುತ್ತಮ ಸಾಧನೆ”

ಕುಂದಾಪುರ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಡೋಣ ಬಾ ಬೇಸಿಗೆ ಶಿಬಿರಕ್ಕೆ ಚಾಲನೆ.ಕ್ರೀಡಾಸಾಧಕರಿಗೆ ಸರಕಾರಿ ಉದ್ಯೋಗ ಅವಕಾಶ – ಕ್ರೀಡಾಪಟು ಪೊಲೀಸ್ ಅಧಿಕಾರಿ ನವೀನ್ ಕಾಂಚನ್

ಬ್ರಹ್ಮಾವರ : ಸುಜ್ಞಾನ ವಿದ್ಯಾ ಸಂಸ್ಥೆ ವಿದ್ಯಾರ್ಥಿವೇತನ ಪರೀಕ್ಷೆ ಉದ್ಘಾಟನೆ : ಅಂಕಗಳಿಕೆ ಜೊತೆಗೆ ಸಾಮಾಜಿಕ ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಿ. ಮಾಜೀ ಸಂಸದ ಜಯಪ್ರಕಾಶ್ ಹೆಗ್ಡೆ

ಬ್ರಹ್ಮಾವರ: ಹೇರಾಡಿ ಹೊಸಳಾದಲ್ಲಿ ಮರಳು ಗಣಿಗಾರಿಕೆ – ಗುತ್ತಿಗೆದಾರರ ಮತ್ತು ನಾಗರೀಕ ನಡುವೆ ಜಟಾಪಟಿ, ಶಾಸಕರ ಹಾಗೂ ಸಂಸದರ ಮೌನ

Leave a Comment