ಬಡವರ ವಿವಾಹದ ಕನಸಿಗೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಆಸರೆ: ಏಪ್ರಿಲ್ 9ಕ್ಕೆ ಉಚಿತ ಸಾಮೂಹಿಕ ವಿವಾಹ.

ಉಡುಪಿ: ಸಮಾಜದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಮತ್ತು ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಈ ಬಾರಿಯೂ ‘ಉಚಿತ ಸಾಮೂಹಿಕ ವಿವಾಹ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಏಪ್ರಿಲ್ 9ಕ್ಕೆ ಮುಹೂರ್ತ ನಿಗದಿ:
ಏಪ್ರಿಲ್ 09, 2026ರ ಗುರುವಾರ ಸಂಜೆ ಸುಮುಹೂರ್ತದ ‘ಗೋಧೂಳಿ ಲಗ್ನ’ದಲ್ಲಿ ಈ ವಿವಾಹ ಮಹೋತ್ಸವವು ಜರುಗಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ಅತ್ಯಂತ ಶಿಸ್ತುಬದ್ಧ ಹಾಗೂ ಸಂಪ್ರದಾಯಬದ್ಧವಾಗಿ ಕಾರ್ಯಕ್ರಮವನ್ನು ನಡೆಸಲು ಆಯೋಜಕರು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ನೊಂದಾವಣಿಗೆ ಮಾರ್ಚ್ 12 ಕೊನೆಯ ದಿನ:
ಉಚಿತ ಸಾಮೂಹಿಕ ವಿವಾಹ ಮಾಡಿಕೊಳ್ಳಲು ಇಚ್ಛಿಸುವ ಮೊಗವೀರ ಸಮಾಜದ ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಧು-ವರರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಮಾರ್ಚ್ 12, 2026ರ ಒಳಗಾಗಿ ತಮ್ಮ ವ್ಯಾಪ್ತಿಯ ಸ್ಥಳೀಯ ಮೊಗವೀರ ಯುವ ಸಂಘಟನೆಯ ಘಟಕಗಳನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳೊಂದಿಗೆ ನೊಂದಾಯಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.





